ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಗುಸು ಗುಸು ಎನ್ನುತ್ತಿರುವ ವಿಚಾರ ಹಾಗೂ ಮೈಸೂರು ಮುಡಾ ಹಗರಣ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಬೇಕಿರೋದು ಎಂದು ಖಾರವಾಗಿ ನುಡಿದಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ ಅಂತಾ ನೀವೇ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು. ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರ ಯಾವುದೇ ಪಾತ್ರ ಇಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಬದಲಿ ಸೈಟ್ ಕೊಡಲಾಗಿದೆ. ಈಗಲೂ ಸಿಎಂ ಸಿದ್ದರಾಮಯ್ಯರಿಗೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.
ಇನ್ನೂ ಬಿಜೆಪಿಯವರಿಗೆ ಮಾಡಲು ಏನೂ ಕೆಲಸ ಇಲ್ಲ. ಅದಕ್ಕಾಗಿಯೇ ಏನಾದರೂ ವಿಷಯ ಇಟ್ಟುಕೊಂಡು ಅದನ್ನೇ ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಸಿದ್ದರಾಮಯ್ಯರನ್ನು ಕಂಡರೆ ಆಗಲ್ಲ. ಅದಕ್ಕಾಗಿಯೇ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…