ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಪ್ರಕರಣದಲ್ಲಿ ಯಾವುದೇ ಬಲಂವತದ ಕ್ರಮಕ್ಕೆ ಮುಂದಾಗಬಾರುದು ಎಂದು ಹೈಕೋರ್ಟ್ ಇ.ಡಿಗೆ ನಿರ್ದೇಶಿಸಿದೆ.
ಜಾರಿ ನಿರ್ದೇಶನಾಲಯದ (ಇಡಿ) ಕ್ರಮದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಈ ಕುರಿತಾದ ಮಧ್ಯಂತದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಕೆ.ಸೋಮಶೇಖರ್ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂಘದ ಸದಸ್ಯರ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಡಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಇರುವಾಗ ಜಾರಿ ನಿರ್ದೇಶನಾಲಯವು ಬಡಾವಣೆಗಾಗಿ ಗುರುತಿಸಿದ್ದ ಜಾಗವನ್ನು ಜಪ್ತಿ ಮಾಡಲಾಗಿದೆ. ಹಾಗಾಗಿ ಜಪ್ತಿ ಆದೇಶವನ್ನು ರದ್ದು ಮಾಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿ ಇ.ಡಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ಜಪ್ತಿ ಕ್ರಮಗಳ ವಿವರಣೆ ನೀಡುವಂತೆ ಸೂಚಿಸಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…