ಚಿಕ್ಕಬಳ್ಳಾಪುರ: ನನಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೇ ಬೇಡ, ನನಗೆ ಸಚಿವ ಸ್ಥಾನವೇ ಬೇಕು ಎಂದು ಬಾಗೆಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್ ಸುಬ್ಬಾರೆಡ್ಡಿ ಪಟ್ಟುಹಿಡಿದಿದ್ದಾರೆ.
ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ ಇದೀಗ ಅವರು ನನಗೆ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಎಂದು ನಿರಾಕರಿಸಿದ್ದಾರೆ.
ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಕೂಡುವುದಾಗಿ ಹೇಳಿದ್ದರು. ನಂತರ ಸಚಿವ ಸಂಪುಟ ರಚನೆಯ ವೇಳೆ ಎರಡನೇ ಅವಧಿಗೆ ಸಚಿವ ಸ್ಥಾನ ಕೂಡುವುದಾಗಿ ಭರವಸೆ ನೀಡಿದ್ದರು ಎಂದು ಸುಬ್ಬಾರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಈಗ ಅವರು ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದು, ನನಗೆ ಸಚಿವ ಸ್ಥಾನ ಕೊಡಿ. ಯಾವುದೇ ನಿಗಮ ಮಂಡಳಿ ಸ್ಥಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರಿಗೆ ಶಾಸಕ ಸುಬ್ಬಾರೆಡ್ಡಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ನಿನ್ನೆಯಷ್ಟೇ (ಶುಕ್ರವಾರ) ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು. 34 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಿತ್ತು. ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ ಈಗ ಅಧ್ಯಕ್ಷ ಸ್ಥಾನ ಬೇಡ, ಬದಲಾಗಿ ಸಚಿವ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿದ್ದು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅವರು ತಿರಸ್ಕರಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…