ಚಿಕ್ಕಬಳ್ಳಾಪುರ: ನನಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೇ ಬೇಡ, ನನಗೆ ಸಚಿವ ಸ್ಥಾನವೇ ಬೇಕು ಎಂದು ಬಾಗೆಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್ ಸುಬ್ಬಾರೆಡ್ಡಿ ಪಟ್ಟುಹಿಡಿದಿದ್ದಾರೆ.
ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ ಇದೀಗ ಅವರು ನನಗೆ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಎಂದು ನಿರಾಕರಿಸಿದ್ದಾರೆ.
ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಕೂಡುವುದಾಗಿ ಹೇಳಿದ್ದರು. ನಂತರ ಸಚಿವ ಸಂಪುಟ ರಚನೆಯ ವೇಳೆ ಎರಡನೇ ಅವಧಿಗೆ ಸಚಿವ ಸ್ಥಾನ ಕೂಡುವುದಾಗಿ ಭರವಸೆ ನೀಡಿದ್ದರು ಎಂದು ಸುಬ್ಬಾರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಈಗ ಅವರು ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದು, ನನಗೆ ಸಚಿವ ಸ್ಥಾನ ಕೊಡಿ. ಯಾವುದೇ ನಿಗಮ ಮಂಡಳಿ ಸ್ಥಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರಿಗೆ ಶಾಸಕ ಸುಬ್ಬಾರೆಡ್ಡಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ನಿನ್ನೆಯಷ್ಟೇ (ಶುಕ್ರವಾರ) ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು. 34 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಿತ್ತು. ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ ಈಗ ಅಧ್ಯಕ್ಷ ಸ್ಥಾನ ಬೇಡ, ಬದಲಾಗಿ ಸಚಿವ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿದ್ದು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅವರು ತಿರಸ್ಕರಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…