Mysore
29
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ಯಾವುದೇ ಗಡುವು ನೀಡಿಲ್ಲ ಎಂದು ಹೇಳಿದರು.

ಎಐಸಿಸಿ ವೀಕ್ಷಕರ ಮುಂದೆಯೇ ಸಿಎಂ ಆಯ್ಕೆ ಮಾಡಲಾಗಿದೆ. ಅಲ್ಲೂ ಕೂಡ ಯಾವುದೇ ಗಡುವು ನೀಡಿಲ್ಲ. ಸದ್ಯ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾರೆ ಎಂದು ಹೇಳಿದರು.

Tags:
error: Content is protected !!