ಬೆಂಗಳೂರು: ರಾಜ್ಯದ ಕೆಲ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿ ಬಗ್ಗೆ ಪರಿಶೀಲನೆ ನಡೆಸಲು ಉಪಸಮಿತಿ ರಚನೆ ಮಾಡಲಾಗಿದೆ.
ಆದ್ದರಿಂದ ಉಪಸಮಿತಿ ವರದಿ ಕೊಡುವುದು ಇನ್ನೂ ಬಾಕಿಯಿದ್ದು, ವರದಿ ಬರುತ್ತಿದ್ದಂತೆ ಅದನ್ನು ಸಂಪುಟದ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಈ ಎಲ್ಲಾ ವರದಿ ಬರುವ ಮೊದಲೇ ಸುಖಾಸುಮ್ಮನೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂತಹ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ನಿಲುವಿಗೆ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ ಸಿಕ್ಕಿದ್ದು, ವಿವಿ ಬಂದ್ ಮಾಡುವುದು ಬೇಡ ಎಂದು ಪದೇ ಪದೇ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದ ಜನರು ಈಗ ಫುಲ್ ಖುಷ್ ಆಗಿದ್ದಾರೆ.
ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು…
ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.18ಕ್ಕೆ ಬದಲಾಗಿ ಏಪ್ರಿಲ್.15ರಂದೇ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500…
ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ…
ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಈ…
ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ.…