ಬೆಂಗಳೂರು: ರಾಜ್ಯದ ಕೆಲ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿ ಬಗ್ಗೆ ಪರಿಶೀಲನೆ ನಡೆಸಲು ಉಪಸಮಿತಿ ರಚನೆ ಮಾಡಲಾಗಿದೆ.
ಆದ್ದರಿಂದ ಉಪಸಮಿತಿ ವರದಿ ಕೊಡುವುದು ಇನ್ನೂ ಬಾಕಿಯಿದ್ದು, ವರದಿ ಬರುತ್ತಿದ್ದಂತೆ ಅದನ್ನು ಸಂಪುಟದ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಈ ಎಲ್ಲಾ ವರದಿ ಬರುವ ಮೊದಲೇ ಸುಖಾಸುಮ್ಮನೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂತಹ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ನಿಲುವಿಗೆ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ ಸಿಕ್ಕಿದ್ದು, ವಿವಿ ಬಂದ್ ಮಾಡುವುದು ಬೇಡ ಎಂದು ಪದೇ ಪದೇ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದ ಜನರು ಈಗ ಫುಲ್ ಖುಷ್ ಆಗಿದ್ದಾರೆ.
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…