ಬೆಂಗಳೂರು : ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ.
ಸರ್ಕಾರ ರಚನೆಯಾಗಿ ಆರು ತಿಂಗಳು ಸಮೀಪಿಸುತ್ತಿರುವ ಹೊತ್ತಿನಲ್ಲಿ ಉಂಟಾದ ಗೊಂದಲಗಳಿಗೆ ತೆರೆ ಎಳೆಯುವುದು ಹಾಗೂ ಸಚಿವರನ್ನು ವಿಶ್ವಾಸಕ್ಕೆ ಪಡೆಯುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಅನ್ನು ಏರ್ಪಡಿಸಿದ್ದರು. ಈ ವೇಳೆ ಸಚಿವರಿಗೆ ಕ್ಲಾಸ್ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ಹೇಳಿಕೆಗಳಿಂದ ಪಕ್ಷದ ವರ್ಚಸ್ಸು ಹಾಗೂ ಲೋಕಸಭಾ ಚುನಾವಣೆ ಮೇಲೆ ಬೀರುವ ಪರಿಣಾಮದ ಬಗ್ಗೆ ತಿಳಿಹೇಳಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಪ್ರತಿಯೊಂದು ನಡೆಯೂ ರಾಜ್ಯ ರಾಜಕೀಯದಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಮನದಟ್ಟು ಮಾಡಲು ಉಭಯ ನಾಯಕರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಬಹಿರಂಗ ಹೇಳಿಕೆ ಬೇಡ: ಡಿಕೆ ಶಿವಕುಮಾರ್ : ಇದೇ ವೇಳೆ ಯಾವುದೇ ರೀತಿಯ ಅಸಮಾಧಾನ ಮತ್ತು ಗೊಂದಲದ ವಿಚಾರಗಳು ಇದ್ದರೆ ಪಕ್ಷದ ವೇದಿಕೆಯೊಳಗೆ ಮಾತನಾಡಿ. ಯಾರೂ ಸಹ ಬಹಿರಂಗವಾಗಿ ಮಾತನಾಡಬೇಡಿ. ಸುಖಾ ಸುಮ್ಮನೆ ವಿಪಕ್ಷ ನಾಯಕರಿಗೆ ಅಸ್ತ್ರ ಕೊಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿ ಹೇಳಿದ್ದಾರೆ ಎನ್ನಲಾಗಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಇದಕ್ಕೆ ಈಗ ನಿಮ್ಮ ಶ್ರಮದ ಅಗತ್ಯವಿದೆ. ಮತ್ತೊಮ್ಮೆ ನೀವು ಜಿಲ್ಲಾ ಪ್ರವಾಸ ಮಾಡಿ, ನಿಮಗೆ ಕೊಟ್ಟಿರುವ ಕೆಲಸ ಮತ್ತು ನಿಮ್ಮ ವ್ಯಾಪ್ತಿಯ ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಂಡು ಬರಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಸೇರಿದ್ದ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…