ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ಚರ್ಚೆಯಲ್ಲಿ ಭಾಗವಹಿಸಿದಂತೆ ಈ ವರ್ಷದ ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸುವುದಾಗಿ ಅವರು ಹೇಳಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ಸರ್ಕಾರ ಶಾಸಕರಿಗೆ ಒದಗಿಸುವ ಊಟ, ಉಪಹಾರ, ಚಹಾ ಸೇರಿದಂತೆ ಯಾವುದೇ ತರಹದ ಭತ್ಯೆ, ವಸತಿ ವ್ಯವಸ್ಥೆ ಪಡೆಯುವುದಿಲ್ಲ. ಆದರೆ, ಹೊರಗಿನಿಂದ ಊಟ ತರಿಸಿಕೊಂಡು ಬಳಸಲು ಅನುವು ಮಾಡಿಕೊಡಬೇಕೆಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನು ಓದಿ: ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ
ಉತ್ತರ ಕರ್ನಾಟಕದ ಸಮಸ್ಯೆ ಮತ್ತು ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷವೂ ನಡೆಸುವ ಚಳಿಗಾಲದ ಅಧಿವೇಶನದಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಳೆದ ಅಧಿವೇಶನದಲ್ಲಿ ನಡೆದ ಚರ್ಚೆಗಳ ವಿಷಯಗಳ ಕುರಿತು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ರಾಜ್ಯದ ಜನತೆಗೆ ಇದುವರೆಗೂ ತಿಳಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎರಡು ವಾರಗಳ ಕಾಲ ಪ್ರವಾಸಕ್ಕೆ ಬಂದಂತೆಯೇ ಆಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಕೇವಲ ಚರ್ಚೆ, ಮಾತುಗಳಿಂದ ಜನ ಕಲ್ಯಾಣ ಅಸಾಧ್ಯ. ಉತ್ತರ ಕರ್ನಾಟಕದ ರೈತರು, ಬಡವರು, ಕಾರ್ಮಿಕರು ಮತ್ತು ಜನಸಾಮಾನ್ಯರು ಹತ್ತು ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆ ಹೊಂದಿದ್ಧಾರೆ. ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಅನುದಾನ ತರುತ್ತಾರೆ ಎಂಬ ಆಶಾಭಾವನೆ ಹೊಂದಿರುತ್ತಾರೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಮುಂಗಾರು ಮಳೆ ಮತ್ತು ಪ್ರವಾಹದಿಂದ ಲಕ್ಷಾಂತರ ರೈತರ ಕೋಟ್ಯಂತರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಆದರೂ ರಾಜ್ಯ ಸರ್ಕಾರ ಇದುವರೆಗೆ ಒಂದು ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…
ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾರೆ. ಈ…
ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…