ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಿಲ್ಲ ಗ್ರೇಸ್‌ ಮಾರ್ಕ್ಸ್‌: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡುವುದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಇಂದು (ಮೇ.17) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಕೊಂಡರು. ಈ ವರ್ಷ 20 ಗ್ರೇಸ್‌ ಮಾರ್ಕ್ಸ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಯಾವ ಕಾರಣಕ್ಕೆ 20 ಗ್ರೇಸ್‌ ಮಾರ್ಕ್ಸ್ ಕೊಡಲಾಗಿದೆ ಗ್ರೇಸ್‌ ಮಾರ್ಕ್ಸ್ ಕೊಡಲು ನಿಮಗೆ ಹೇಳಿದ್ದು ಯಾರು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ವಿದ್ಯಾರ್ಥಿಗಳು ಅರ್ಹತೆ ಆಧಾರದಲ್ಲಿ ಅಂಕಗಳಿಸಿ ಪ್ರಗತಿ ಸಾಧಿಸಬೇಕು. ಅಲ್ಲದೇ ಗ್ರೇಸ್‌ ಮಾರ್ಕ್ಸ್ ನೀಡುವುದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಸಾಮಾಥ್ಯ ಕಡಿಮೆಯಾಗುತ್ತೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳೇನು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳನ್ನ ಖಾರವಾಗಿ ಪ್ರಶ್ನಿಸಿದರು. ಡಿಸಿಎಂ ಮಾತಿಗೆ ಸಿಎಂ ಸಹಮತ ಸೂಚಿಸಿದರು.

300 ಅಂಕ ಪಡೆದಿದ್ದ ಡಿಸಿಎಂ: ಸಭೆಯಲ್ಲಿ ತಾವು ಪಡೆದ ಅಂಕವನ್ನು ಪ್ರಸ್ತಾಪಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ನಾನು ಕೂಡ 300 ಅಂಕ ಪಡೆದಿದ್ದೆ ಹಾಗೆಂದು ಅಸಮರ್ಥರ ಎಂದು ಪ್ರಶ್ನಿಸಿದರು.

ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್ ನೀಡುತ್ತಿದ್ದೆವು. ಈಗ ಅದನ್ನು ಹೆಚ್ಚಿಸಿದ್ದೇವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಮಜಾಹಿಸಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಈಗ ಏನು ಕೋವಿಡ್‌ ಇದೆಯೇನ್ರೀ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೇ 9 ರಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗಿದೆ ಎಂದು ಎಸ್ಎಸ್ಎಲ್‌ಸಿ ಮಂಡಳಿ ತಿಳಿಸಿತ್ತು. ತೇರ್ಗಡೆಯ ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು. ಒಂದು ವೇಳೆ ಗ್ರೇಸ್‌ ಮಾರ್ಕ್ಸ್ ನೀಡಲಿಲ್ಲ ಎಂದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶದ ಪ್ರಮಾಣ ಇನ್ನೂ ಕುಸಿಯುತ್ತಿತ್ತು ಎಂದು ಮಂಡಳಿ ತಿಳಿಸಿತು.

ಈಗ ನೀಡಿರುವ ಗ್ರೇಸ್‌ ಮಾರ್ಕ್ಸ್ ನಲ್ಲಿ ಬದಲಾವಣೆ ಇಲ್ಲ: ಮಧು ಬಂಗಾರಪ್ಪ
ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ ಎಂದು ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷ ಮಾತ್ರ ಮಾತ್ರ ಗ್ರೇಸ್‌ ಮಾರ್ಕ್ಸ್ ಕೊಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಕೊಟ್ಟಿರುವ ಗ್ರೇಸ್‌ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಬಾರಿ 20 ಗ್ರೇಸ್‌ ಮಾರ್ಕ್ಸ್ ಕೊಟ್ಟರು ಫಲಿತಾಂಶ ಕಡಿಮೆಯಾಗಿತ್ತು. ಈ ವಿಚಾರ ರಾಜ್ಯದ್ಯಾಂತ ಚರ್ಚೆಯಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

6 hours ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

6 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

8 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

9 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

10 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

11 hours ago