ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಿಲ್ಲ ಗ್ರೇಸ್‌ ಮಾರ್ಕ್ಸ್‌: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡುವುದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಇಂದು (ಮೇ.17) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಕೊಂಡರು. ಈ ವರ್ಷ 20 ಗ್ರೇಸ್‌ ಮಾರ್ಕ್ಸ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಯಾವ ಕಾರಣಕ್ಕೆ 20 ಗ್ರೇಸ್‌ ಮಾರ್ಕ್ಸ್ ಕೊಡಲಾಗಿದೆ ಗ್ರೇಸ್‌ ಮಾರ್ಕ್ಸ್ ಕೊಡಲು ನಿಮಗೆ ಹೇಳಿದ್ದು ಯಾರು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ವಿದ್ಯಾರ್ಥಿಗಳು ಅರ್ಹತೆ ಆಧಾರದಲ್ಲಿ ಅಂಕಗಳಿಸಿ ಪ್ರಗತಿ ಸಾಧಿಸಬೇಕು. ಅಲ್ಲದೇ ಗ್ರೇಸ್‌ ಮಾರ್ಕ್ಸ್ ನೀಡುವುದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಸಾಮಾಥ್ಯ ಕಡಿಮೆಯಾಗುತ್ತೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳೇನು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳನ್ನ ಖಾರವಾಗಿ ಪ್ರಶ್ನಿಸಿದರು. ಡಿಸಿಎಂ ಮಾತಿಗೆ ಸಿಎಂ ಸಹಮತ ಸೂಚಿಸಿದರು.

300 ಅಂಕ ಪಡೆದಿದ್ದ ಡಿಸಿಎಂ: ಸಭೆಯಲ್ಲಿ ತಾವು ಪಡೆದ ಅಂಕವನ್ನು ಪ್ರಸ್ತಾಪಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ನಾನು ಕೂಡ 300 ಅಂಕ ಪಡೆದಿದ್ದೆ ಹಾಗೆಂದು ಅಸಮರ್ಥರ ಎಂದು ಪ್ರಶ್ನಿಸಿದರು.

ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್ ನೀಡುತ್ತಿದ್ದೆವು. ಈಗ ಅದನ್ನು ಹೆಚ್ಚಿಸಿದ್ದೇವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಮಜಾಹಿಸಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಈಗ ಏನು ಕೋವಿಡ್‌ ಇದೆಯೇನ್ರೀ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೇ 9 ರಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗಿದೆ ಎಂದು ಎಸ್ಎಸ್ಎಲ್‌ಸಿ ಮಂಡಳಿ ತಿಳಿಸಿತ್ತು. ತೇರ್ಗಡೆಯ ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು. ಒಂದು ವೇಳೆ ಗ್ರೇಸ್‌ ಮಾರ್ಕ್ಸ್ ನೀಡಲಿಲ್ಲ ಎಂದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶದ ಪ್ರಮಾಣ ಇನ್ನೂ ಕುಸಿಯುತ್ತಿತ್ತು ಎಂದು ಮಂಡಳಿ ತಿಳಿಸಿತು.

ಈಗ ನೀಡಿರುವ ಗ್ರೇಸ್‌ ಮಾರ್ಕ್ಸ್ ನಲ್ಲಿ ಬದಲಾವಣೆ ಇಲ್ಲ: ಮಧು ಬಂಗಾರಪ್ಪ
ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ ಎಂದು ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷ ಮಾತ್ರ ಮಾತ್ರ ಗ್ರೇಸ್‌ ಮಾರ್ಕ್ಸ್ ಕೊಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಕೊಟ್ಟಿರುವ ಗ್ರೇಸ್‌ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಬಾರಿ 20 ಗ್ರೇಸ್‌ ಮಾರ್ಕ್ಸ್ ಕೊಟ್ಟರು ಫಲಿತಾಂಶ ಕಡಿಮೆಯಾಗಿತ್ತು. ಈ ವಿಚಾರ ರಾಜ್ಯದ್ಯಾಂತ ಚರ್ಚೆಯಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago