ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ( ಅಕ್ಟೋಬರ್‌ 9 ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಕೊಡಬೇಡಿ ಎಂದು ಆದೇಶ ಮಾಡಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡಲಾಗುವುದಿಲ್ಲ ಎಂದು ಹೇಳಿದರು.

ಕಳೆದ ವರ್ಷ ಶೇ.83ರಷ್ಟು ಫಲಿತಾಂಶ ಬಂದಿತ್ತು. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 6,31,204 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಇವರಲ್ಲಿ ಶೇ.1.70 ಲಕ್ಷ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಕೃಪಾಂಕ ನೀಡಲಾಗಿತ್ತು. ಹೀಗಿದ್ದರೂ ಕಳೆದ ವರ್ಷಕ್ಕಿಂತ ಶೇ.10ರಷ್ಟು ಫಲಿತಾಂಶ ಕುಸಿದಿದ್ದು, ರಾಜ್ಯದ ಒಟ್ಟಾರೆ ಫಲಿತಾಂಶ ಶೇ.73.40 ರಷ್ಟು ಆಗಿದೆ. ಹಾಗಾಗಿ ಮುಂದಿನ ವರ್ಷದಿಂದ ಗ್ರೇಶ್‌ ಮಾರ್ಕ್ಸ್‌ಗಳನ್ನು ನೀಡುವುದಿಲ್ಲ. ಈ ವರ್ಷ 2288 ಶಾಲೆಗಳು ಶೇ.100 ರಷ್ಟು ಫಲಿತಾಂಶವನ್ನು ಮಾತ್ರ ಪಡೆದುಕೊಂಡಿವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago