Sharan Prakash Patil
ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.
ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…