ರಾಜ್ಯ

ಕೆಎಎಸ್‌ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಕೆಪಿಎಸ್‌ಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸ್ಪಷ್ಟಪಡಿಸಿದೆ.

ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಸಂದರ್ಶನಕ್ಕೆ (ವೈವೋ) ಆಯ್ಕೆಯಾಗಿದ್ದಾರೆ ಎಂದು ಕೆಲವು ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿ ಇದರಲ್ಲಿ ದೊಡ್ಡಮಟ್ಟದ ಆಕ್ರಮ ನಡೆದಿದೆ ಎಂದು ಆರೋಪಿಸಿದ್ದರು.

ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ತಕ್ಷಣವೇ ಆರೋಪ ಕುರಿತು ಸಮಗ್ರ ವರದಿ ನೀಡುವಂತೆ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಅವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದರು.

ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ವರದಿ ಸಲ್ಲಿಸಿರುವ ಕೆಪಿಸಿ ಕಾರ್ಯದರ್ಶಿ ಜ್ಯೋತಿ, ಮುಖ್ಯ ಪರೀಕ್ಷೆಯ ವೇಳೆ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆದಿದ್ದು, ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆಂದು ಸರ್ಕಾರಕ್ಕೆ ವರದಿ ನೀಡಿದ್ದಾರೆ ಎಂದು ಗೊತ್ತಾಗಿದೆ.

ವರದಿಯಲ್ಲಿ ಪ್ರಮುಖವಾಗಿ ಮೂರು ವಿಷಯಗಳನ್ನು ಸ್ಪಷ್ಟಪಡಿಸಲಾಗಿದೆ. ಮೊದಲನೆಯದಾಗಿ, ಒಂದೇ ಕೊಠಡಿಯಿಂದ 15 ಜನ ಅಭ್ಯರ್ಥಿಗಳು ಉತ್ತೀರ್ಣ ಆಗಿದ್ದಾರೆ ಎಂಬ ಆರೋಪ ಸತ್ಯವಲ್ಲ ಎಂದು ದೃಡಪಡಿಸಲಾಗಿದೆ. ಆ ಕೊಠಡಿಯಿಂದ 15 ಜನ ಅಲ್ಲ, 11 ಜನ ಮಾತ್ರ ಉತ್ತೀರ್ಣರಾಗಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯವಾಗಿ ಹಲವು ಪ್ರತಿಭಾವಂತ ಅಭ್ಯರ್ಥಿಗಳು ಇದ್ದರೆ ಒಂದೇ ಸ್ಥಳದಿಂದ ಹೆಚ್ಚು ಮಂದಿ ಉತ್ತೀರ್ಣ ಆಗುವುದು ಅಸಾಧಾರಣ ವಿಷಯವಲ್ಲ ಎಂದು ಹೇಳಲಾಗಿದೆ.

ಎರಡನೆಯದಾಗಿ, ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂಬುದನ್ನು ದೃಢಪಡಿಸಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅನುಮಾನ ವ್ಯಕ್ತವಾದ ಪರೀಕ್ಷಾ ಕೊಠಡಿಗಳ ದೃಶ್ಯಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲಾಗಿದ್ದು, ಪರೀಕ್ಷೆಯ ವೇಳೆ ಯಾವುದೇ ಅಕ್ರಮ ಅಥವಾ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿಲ್ಲ ಎಂದು ತಿಳಿಸಲಾಗಿದೆ.

ಮೂರನೆಯದಾಗಿ, ಇದುವರೆಗೆ ಯಾವುದೇ ಅಭ್ಯರ್ಥಿ ಅಥವಾ ವ್ಯಕ್ತಿ ನೇರವಾಗಿ ಕೆಪಿಎಸ್‌ಗೆ ಬಂದು ಅಧಿಕೃತ ದೂರು ಸಲ್ಲಿಸಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

13 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

16 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago