ರಾಜ್ಯ

ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ: ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎವೆರಿತಿಂಗ್ ಕೂಲ್ ಟುಡೇ ಸಭೆಯ ಚರ್ಚೆಗಳ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ಬೆಂಗಳೂರಿನಿಂದ ಹೊರಡುವ ಮುನ್ನ ಸ್ಪಷ್ಟ ಮಾಹಿತಿ ನೀಡಿಯೇ ಹೋಗುತ್ತೇನೆ. ಎಲ್ಲದಕ್ಕೂ ವಿರಾಮ ಇದೆ ಎಂದು ಹೇಳಿದ್ದಾರೆ.

ದೆಹಲಿಯಿಂದ ಆಗಮಿಸಿದ ಸುರ್ಜೇವಾಲ ಮೂರು ದಿನಗಳ ಸಭೆಯಲ್ಲಿ ಶಾಸಕರ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದು, ಎರಡನೇ ಹಂತದಲ್ಲಿ 60 ಶಾಸಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ. ಜೊತೆಗೆ ಸಚಿವರ ಜೊತೆ ಕೂಡ ಮಾತುಕತೆ ನಡೆಸಲಿದ್ದಾರೆ.

ಕೆಲದಿನಗಳ ಹಿಂದೆ ಶಾಸಕರ, ಸಚಿವರ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲಗಳಾಗಿತ್ತು. ಅದಕ್ಕೆ ಕಡಿವಾಣ ಹಾಕಲು ಸುರ್ಜೇವಾಲ ರಾಜ್ಯಕ್ಕಾಗಮಿಸಿದ್ದಾರೆ. ಸಚಿವರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಕಾರ್ಯವೈಖರಿ ಬಗ್ಗೆ ಕೂಡ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ರಾಜ್ಯ ರಾಜಕೀಯದ ಬಗ್ಗೆ ಸುರ್ಜೇವಾಲ ನೀಡುವ ವರದಿ ಕುತೂಹಲ ಕೆರಳಿಸಿದೆ. ಮೂರು ದಿನಗಳ ಸಭೆಯ ನಂತರ ಮುಂದಿನ ವಾರ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago