ರಾಜ್ಯ

ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ: ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಎಲ್ಲವೂ ತಣ್ಣಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎವೆರಿತಿಂಗ್ ಕೂಲ್ ಟುಡೇ ಸಭೆಯ ಚರ್ಚೆಗಳ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ಬೆಂಗಳೂರಿನಿಂದ ಹೊರಡುವ ಮುನ್ನ ಸ್ಪಷ್ಟ ಮಾಹಿತಿ ನೀಡಿಯೇ ಹೋಗುತ್ತೇನೆ. ಎಲ್ಲದಕ್ಕೂ ವಿರಾಮ ಇದೆ ಎಂದು ಹೇಳಿದ್ದಾರೆ.

ದೆಹಲಿಯಿಂದ ಆಗಮಿಸಿದ ಸುರ್ಜೇವಾಲ ಮೂರು ದಿನಗಳ ಸಭೆಯಲ್ಲಿ ಶಾಸಕರ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದು, ಎರಡನೇ ಹಂತದಲ್ಲಿ 60 ಶಾಸಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ. ಜೊತೆಗೆ ಸಚಿವರ ಜೊತೆ ಕೂಡ ಮಾತುಕತೆ ನಡೆಸಲಿದ್ದಾರೆ.

ಕೆಲದಿನಗಳ ಹಿಂದೆ ಶಾಸಕರ, ಸಚಿವರ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲಗಳಾಗಿತ್ತು. ಅದಕ್ಕೆ ಕಡಿವಾಣ ಹಾಕಲು ಸುರ್ಜೇವಾಲ ರಾಜ್ಯಕ್ಕಾಗಮಿಸಿದ್ದಾರೆ. ಸಚಿವರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಕಾರ್ಯವೈಖರಿ ಬಗ್ಗೆ ಕೂಡ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ರಾಜ್ಯ ರಾಜಕೀಯದ ಬಗ್ಗೆ ಸುರ್ಜೇವಾಲ ನೀಡುವ ವರದಿ ಕುತೂಹಲ ಕೆರಳಿಸಿದೆ. ಮೂರು ದಿನಗಳ ಸಭೆಯ ನಂತರ ಮುಂದಿನ ವಾರ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

54 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

56 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

58 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

60 mins ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago