no issues in karnataka congress said randeep singh surjewala
ಬೆಂಗಳೂರು: ಕಾಂಗ್ರೆಸ್ನಲ್ಲಿ ಎಲ್ಲವೂ ತಣ್ಣಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎವೆರಿತಿಂಗ್ ಕೂಲ್ ಟುಡೇ ಸಭೆಯ ಚರ್ಚೆಗಳ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ಬೆಂಗಳೂರಿನಿಂದ ಹೊರಡುವ ಮುನ್ನ ಸ್ಪಷ್ಟ ಮಾಹಿತಿ ನೀಡಿಯೇ ಹೋಗುತ್ತೇನೆ. ಎಲ್ಲದಕ್ಕೂ ವಿರಾಮ ಇದೆ ಎಂದು ಹೇಳಿದ್ದಾರೆ.
ದೆಹಲಿಯಿಂದ ಆಗಮಿಸಿದ ಸುರ್ಜೇವಾಲ ಮೂರು ದಿನಗಳ ಸಭೆಯಲ್ಲಿ ಶಾಸಕರ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದು, ಎರಡನೇ ಹಂತದಲ್ಲಿ 60 ಶಾಸಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ. ಜೊತೆಗೆ ಸಚಿವರ ಜೊತೆ ಕೂಡ ಮಾತುಕತೆ ನಡೆಸಲಿದ್ದಾರೆ.
ಕೆಲದಿನಗಳ ಹಿಂದೆ ಶಾಸಕರ, ಸಚಿವರ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲಗಳಾಗಿತ್ತು. ಅದಕ್ಕೆ ಕಡಿವಾಣ ಹಾಕಲು ಸುರ್ಜೇವಾಲ ರಾಜ್ಯಕ್ಕಾಗಮಿಸಿದ್ದಾರೆ. ಸಚಿವರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಕಾರ್ಯವೈಖರಿ ಬಗ್ಗೆ ಕೂಡ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ರಾಜ್ಯ ರಾಜಕೀಯದ ಬಗ್ಗೆ ಸುರ್ಜೇವಾಲ ನೀಡುವ ವರದಿ ಕುತೂಹಲ ಕೆರಳಿಸಿದೆ. ಮೂರು ದಿನಗಳ ಸಭೆಯ ನಂತರ ಮುಂದಿನ ವಾರ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…