no issues in karnataka congress said randeep singh surjewala
ಬೆಂಗಳೂರು: ಕಾಂಗ್ರೆಸ್ನಲ್ಲಿ ಎಲ್ಲವೂ ತಣ್ಣಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಜೊತೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎವೆರಿತಿಂಗ್ ಕೂಲ್ ಟುಡೇ ಸಭೆಯ ಚರ್ಚೆಗಳ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ಬೆಂಗಳೂರಿನಿಂದ ಹೊರಡುವ ಮುನ್ನ ಸ್ಪಷ್ಟ ಮಾಹಿತಿ ನೀಡಿಯೇ ಹೋಗುತ್ತೇನೆ. ಎಲ್ಲದಕ್ಕೂ ವಿರಾಮ ಇದೆ ಎಂದು ಹೇಳಿದ್ದಾರೆ.
ದೆಹಲಿಯಿಂದ ಆಗಮಿಸಿದ ಸುರ್ಜೇವಾಲ ಮೂರು ದಿನಗಳ ಸಭೆಯಲ್ಲಿ ಶಾಸಕರ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದು, ಎರಡನೇ ಹಂತದಲ್ಲಿ 60 ಶಾಸಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ. ಜೊತೆಗೆ ಸಚಿವರ ಜೊತೆ ಕೂಡ ಮಾತುಕತೆ ನಡೆಸಲಿದ್ದಾರೆ.
ಕೆಲದಿನಗಳ ಹಿಂದೆ ಶಾಸಕರ, ಸಚಿವರ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲಗಳಾಗಿತ್ತು. ಅದಕ್ಕೆ ಕಡಿವಾಣ ಹಾಕಲು ಸುರ್ಜೇವಾಲ ರಾಜ್ಯಕ್ಕಾಗಮಿಸಿದ್ದಾರೆ. ಸಚಿವರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಕಾರ್ಯವೈಖರಿ ಬಗ್ಗೆ ಕೂಡ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ರಾಜ್ಯ ರಾಜಕೀಯದ ಬಗ್ಗೆ ಸುರ್ಜೇವಾಲ ನೀಡುವ ವರದಿ ಕುತೂಹಲ ಕೆರಳಿಸಿದೆ. ಮೂರು ದಿನಗಳ ಸಭೆಯ ನಂತರ ಮುಂದಿನ ವಾರ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…