ರಾಜ್ಯ

ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ: ಸೆಷನ್ಸ್ ನ್ಯಾಯಾಲಯ

ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂದಿಸಲಾಗಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಆರೋಪಿಯು ಇನ್ನು ಮುಂದೆ ಯಾವುದೇ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಎಚ್ಚರಿಕೆ ಸೆಷನ್‌ ನ್ಯಾಯಾಲಯ ತಾಕೀತು ನೀಡಿದೆ. ಒಂದು ವೇಳೆ ದ್ವೇಷ ಭಾಷಣ ಮಾಡಿ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ ಎಂದು ನ್ಯಾಯಾಲು ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ. ಆರೋಪಿಯು ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಪುನರಾವರ್ತಿಸಬಾರದು. ದ್ವೇಷ ಭಾಷಣ ಮಾಡಿದ ಬಗ್ಗೆ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ” ಎಂದು ಷರತ್ತು ವಿಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ಮುಂದೆ ಕಲ್ಲಡ್ಕ ಪ್ರಭಾಕರ್ ಭಟ್ ಎಲ್ಲೇ ದ್ವೇಷ ಭಾಷಣ ಮಾಡಿದರೂ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ನೀವು ದಾಖಲಿಸಿದ ಎಫ್‌ಐಆರ್ ಗೂ ಜಾಮೀನು ಸಿಗಲ್ಲ, ಈಗ ಶ್ರೀರಂಗಪಟ್ಟಣದಲ್ಲಿ ಸಿಕ್ಕಿರುವ ಜಾಮೀನೂ ರದ್ದಾಗುತ್ತದೆ. ಸ್ವಸ್ಥ ಸಮಾಜಕ್ಕಾಗಿ ಇಷ್ಟು ಮಾಡುವುದು ಅನಿವಾರ್ಯ” “ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಇರುವ ಹಲವು ಖಾಯಿಲೆಗಳು, ವಯಸ್ಪೂ ಸೇರಿದಂತೆ ಕೆಲ ವಿಷಯಗಳನ್ನು ಆಧರಿಸಿ ಕೋರ್ಟ್ ಜಾಮೀನು ನೀಡಿದೆ.

andolanait

Recent Posts

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

39 mins ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

47 mins ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಅರ್ಧ ಲೀಟರ್ ನೀರಿನ ಬಾಟಲಿ ಕೊರತೆ

ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…

50 mins ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಯಾವಾಗ?

ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…

52 mins ago

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…

55 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ವಿಶಾಲ್ ಸಿಂಗ್ ಎಂಬ ಬಡರೋಗಿಗಳ ಅನ್ನದಾತ

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…

58 mins ago