ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂದಿಸಲಾಗಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಆರೋಪಿಯು ಇನ್ನು ಮುಂದೆ ಯಾವುದೇ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಎಚ್ಚರಿಕೆ ಸೆಷನ್ ನ್ಯಾಯಾಲಯ ತಾಕೀತು ನೀಡಿದೆ. ಒಂದು ವೇಳೆ ದ್ವೇಷ ಭಾಷಣ ಮಾಡಿ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ ಎಂದು ನ್ಯಾಯಾಲು ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ. ಆರೋಪಿಯು ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಪುನರಾವರ್ತಿಸಬಾರದು. ದ್ವೇಷ ಭಾಷಣ ಮಾಡಿದ ಬಗ್ಗೆ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ” ಎಂದು ಷರತ್ತು ವಿಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ಮುಂದೆ ಕಲ್ಲಡ್ಕ ಪ್ರಭಾಕರ್ ಭಟ್ ಎಲ್ಲೇ ದ್ವೇಷ ಭಾಷಣ ಮಾಡಿದರೂ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ನೀವು ದಾಖಲಿಸಿದ ಎಫ್ಐಆರ್ ಗೂ ಜಾಮೀನು ಸಿಗಲ್ಲ, ಈಗ ಶ್ರೀರಂಗಪಟ್ಟಣದಲ್ಲಿ ಸಿಕ್ಕಿರುವ ಜಾಮೀನೂ ರದ್ದಾಗುತ್ತದೆ. ಸ್ವಸ್ಥ ಸಮಾಜಕ್ಕಾಗಿ ಇಷ್ಟು ಮಾಡುವುದು ಅನಿವಾರ್ಯ” “ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಇರುವ ಹಲವು ಖಾಯಿಲೆಗಳು, ವಯಸ್ಪೂ ಸೇರಿದಂತೆ ಕೆಲ ವಿಷಯಗಳನ್ನು ಆಧರಿಸಿ ಕೋರ್ಟ್ ಜಾಮೀನು ನೀಡಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…