ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂದಿಸಲಾಗಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಆರೋಪಿಯು ಇನ್ನು ಮುಂದೆ ಯಾವುದೇ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಎಚ್ಚರಿಕೆ ಸೆಷನ್ ನ್ಯಾಯಾಲಯ ತಾಕೀತು ನೀಡಿದೆ. ಒಂದು ವೇಳೆ ದ್ವೇಷ ಭಾಷಣ ಮಾಡಿ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ ಎಂದು ನ್ಯಾಯಾಲು ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ. ಆರೋಪಿಯು ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಪುನರಾವರ್ತಿಸಬಾರದು. ದ್ವೇಷ ಭಾಷಣ ಮಾಡಿದ ಬಗ್ಗೆ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ” ಎಂದು ಷರತ್ತು ವಿಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ಮುಂದೆ ಕಲ್ಲಡ್ಕ ಪ್ರಭಾಕರ್ ಭಟ್ ಎಲ್ಲೇ ದ್ವೇಷ ಭಾಷಣ ಮಾಡಿದರೂ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ನೀವು ದಾಖಲಿಸಿದ ಎಫ್ಐಆರ್ ಗೂ ಜಾಮೀನು ಸಿಗಲ್ಲ, ಈಗ ಶ್ರೀರಂಗಪಟ್ಟಣದಲ್ಲಿ ಸಿಕ್ಕಿರುವ ಜಾಮೀನೂ ರದ್ದಾಗುತ್ತದೆ. ಸ್ವಸ್ಥ ಸಮಾಜಕ್ಕಾಗಿ ಇಷ್ಟು ಮಾಡುವುದು ಅನಿವಾರ್ಯ” “ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಇರುವ ಹಲವು ಖಾಯಿಲೆಗಳು, ವಯಸ್ಪೂ ಸೇರಿದಂತೆ ಕೆಲ ವಿಷಯಗಳನ್ನು ಆಧರಿಸಿ ಕೋರ್ಟ್ ಜಾಮೀನು ನೀಡಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…