ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂದಿಸಲಾಗಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಆರೋಪಿಯು ಇನ್ನು ಮುಂದೆ ಯಾವುದೇ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಎಚ್ಚರಿಕೆ ಸೆಷನ್ ನ್ಯಾಯಾಲಯ ತಾಕೀತು ನೀಡಿದೆ. ಒಂದು ವೇಳೆ ದ್ವೇಷ ಭಾಷಣ ಮಾಡಿ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ ಎಂದು ನ್ಯಾಯಾಲು ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವಂತಿಲ್ಲ. ಆರೋಪಿಯು ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಪುನರಾವರ್ತಿಸಬಾರದು. ದ್ವೇಷ ಭಾಷಣ ಮಾಡಿದ ಬಗ್ಗೆ ದೂರು ದಾಖಲಾದರೆ ಈಗ ಸಿಕ್ಕಿರುವ ಜಾಮೀನು ರದ್ದಾಗುತ್ತದೆ” ಎಂದು ಷರತ್ತು ವಿಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ಮುಂದೆ ಕಲ್ಲಡ್ಕ ಪ್ರಭಾಕರ್ ಭಟ್ ಎಲ್ಲೇ ದ್ವೇಷ ಭಾಷಣ ಮಾಡಿದರೂ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ನೀವು ದಾಖಲಿಸಿದ ಎಫ್ಐಆರ್ ಗೂ ಜಾಮೀನು ಸಿಗಲ್ಲ, ಈಗ ಶ್ರೀರಂಗಪಟ್ಟಣದಲ್ಲಿ ಸಿಕ್ಕಿರುವ ಜಾಮೀನೂ ರದ್ದಾಗುತ್ತದೆ. ಸ್ವಸ್ಥ ಸಮಾಜಕ್ಕಾಗಿ ಇಷ್ಟು ಮಾಡುವುದು ಅನಿವಾರ್ಯ” “ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಇರುವ ಹಲವು ಖಾಯಿಲೆಗಳು, ವಯಸ್ಪೂ ಸೇರಿದಂತೆ ಕೆಲ ವಿಷಯಗಳನ್ನು ಆಧರಿಸಿ ಕೋರ್ಟ್ ಜಾಮೀನು ನೀಡಿದೆ.
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…