ರಾಜ್ಯ

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು:ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು.

ಕಾಂಗ್ರೆಸ್‌ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ್ಯುತ್‌ ತಂತಿ ತಗುಲಿ ತಾಯಿ ಮತ್ತು ಮಗು ಮೃತಪಟ್ಟಾಗ ಅದಕ್ಕೆ ಇಲಿ ಕಾರಣ ಎಂದು ಹೇಳಿದ್ದರು. ಮಳೆ ನೀರಿನಲ್ಲಿ ಮಗು ಕೊಚ್ಚಿಕೊಂಡು ಹೋಗಿರುವುದು, ಮರ ಬೀಳುವುದರಿಂದ ಅನಾಹುತ ಮೊದಲಾದವು ಬ್ರ್ಯಾಂಡ್‌ ಬೆಂಗಳೂರಿನ ಮಹಿಮೆಯಿಂದ ಆಗುತ್ತಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರುವ ರಸ್ತೆಯ ಎರಡೂ ಬದಿ ಕಸ ರಾಶಿಯಾಗಿ ಬಿದ್ದಿದೆ. ಅಂದರೆ ಉಪಮುಖ್ಯಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲಿ, ಇಲ್ಲಿ ಯಾರಿಗೂ ಬೆಲೆ ಇಲ್ಲ. ಒಂದು ವಾರದಿಂದ ಸರಿಯಾಗಿ ಕಸ ವಿಲೇವಾರಿ ಮಾಡಿಲ್ಲ. ವಿದ್ಯುತ್‌ ಕಂಬಗಳಿಂದ ಇನ್ನೆಷ್ಟು ಜನ ಸಾಯುತ್ತಾರೆಂದು ಗೊತ್ತಿಲ್ಲ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದರು.

ಪೌರಕಾರ್ಮಿಕರ ಮನೆಗಳಿಗೂ ನೀರು ನುಗ್ಗಿದೆ. ಜನರು ಮನೆಗಳಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ರಾಜಧಾನಿ ಬೆಂಗಳೂರನ್ನು ರಾಜ್ಯ ಸರ್ಕಾರ ಸಂಪೂರ್ಣ ಕಡೆಗಣಿಸಿದೆ. ಸರ್ಕಾರ ಗಾಢ ನಿದ್ದೆಯಲ್ಲಿದ್ದು, ಮೃತಪಟ್ಟವರ ಕುಟುಂಬದ ಶಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಟ್ಟಡ ನಿರ್ಮಾಣದ ವಿಚಾರದಲ್ಲಿ ಸರ್ಕಾರ ಮಾರ್ಗಸೂಚಿ ರೂಪಿಸಬೇಕು. ಕಟ್ಟಡಗಳ ಬಗ್ಗೆ ಸದಾ ನಿಗಾ ಇರಿಸುವ ಕೆಲಸ ಮಾಡಬೇಕು. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ, ಪ್ರತಿ ಮಳೆಗಾಲಕ್ಕೆ ಮುನ್ನ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚಿಸಲಾಗಿತ್ತು. ಜೊತೆಗೆ ಹಣ ಕೂಡ ಬಿಡುಗಡೆ ಮಾಡಲಾಗಿತ್ತು. ಆದರೆ ಈಗ ಸರ್ಕಾರ ಸಭೆ ನಡೆಸಿಲ್ಲ, ಪರಿಹಾರ ಕಾರ್ಯಾಚರಣೆಗೆ, ರಾಜಕಾಲುವೆ ಹೂಳು ತೆಗೆಯಲು ಹಣ ಬಿಡುಗಡೆ ಮಾಡಿಲ್ಲ. ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ. ಜನರು ಅಧಿಕಾರ ಕೊಟ್ಟಾಗ ಕೆಲಸ ಮಾಡಬೇಕೆ ಹೊರತು, ಹಿಂದಿನವರು ಏನು ಮಾಡಿದ್ದಾರೆ ಎಂದು ಮಾತಾಡಬಾರದು. ಕಾಂಗ್ರೆಸ್‌ನವರು ಮೊದಲು ಕೆಲಸ ಮಾಡಲಿ. ಆಪಾದನೆ ಮಾಡಿಕೊಂಡು ಇದ್ದರೆ, ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

21 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

46 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

57 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago