ದಾವಣಗೆರೆ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು, ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ನಾಯಕರು ರಾಜ್ಯವನ್ನು ಕೊಳ್ಳೆಹೊಡೆದು ಹಣ ಹಾಗೂ ಆಸ್ತಿ ಮಾಡಿಕೊಂಡಿದ್ದಾರೆ. ಇಂತಹವರಿಂದ ರಾಜ್ಯ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ನಾಯಕರ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರಲಿವೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಶುದ್ಧಹಸ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅವರಿಂದ ಕರ್ನಾಟಕಕ್ಕೆ ಒಳಿತಾಗಿದೆ. ರಾಜ್ಯಪಾಲರು ಸ್ವನಿರ್ಧಾರ ಕೈಗೊಳ್ಳದೇ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಬಿಜೆಪಿ ನಾಯಕರು ಮಾಡಿದ ದೊಡ್ಡ ಹಗರಣಗಳನ್ನು ಬಿಟ್ಟು ಮುಡಾ ಪ್ರಕರಣ ಹಿಡಿದುಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟನೆ ನೀಡಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…