ರಾಜ್ಯ

ರಾಜ್ಯಪಾಲರಿಗೆ ಎಲ್ಲದಕ್ಕೂ ಉತ್ತರಿಸುವ ಅನಿವಾರ್ಯತೆ ಇಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯಪಾಲರು ಕೇಳುವ ಪ್ರಶ್ನೆಗಳಿಗೆಲ್ಲಾ ಉತ್ತರಿಸುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರಿಸಬೇಕು ಅದಕ್ಕೆ ಖಂಡಿತವಾಗಿಯೇ ಉತ್ತರ ನೀಡುತ್ತೇವೆ. ಅದನ್ನು ಬಿಟ್ಟು ಎಲ್ಲದಕ್ಕೂ ಉತ್ತರಿಸಬೇಕು ಅಂತೇನೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಏಕಾಏಕಿಯಾಗಿ ಸಿಎಂಗೆ ಶೋಕಾಸ್‌ ನೋಟಿಸ್‌ ನೀಡಿರುವುದನ್ನು ಖಂಡಿಸಿ, ಅದು ತಪ್ಪು ಅಂತ ಹೇಳಿ ಅಷ್ಟೇ ಪ್ರತಿಭಟನೆ ನಡೆಸಿದ್ದೇವೆ. ಅದನ್ನು ಹೊರತುಪಡಿಸಿ ಸುಮ್ಮನೆ ಪ್ರತಿಭಟನೆ ನಡೆಸಿಲ್ಲ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ವರದಿಯೂ ಇಲ್ಲ ಮತ್ತು ತನಿಖೆಯೂ ಆಗಿಲ್ಲ. ಹೀಗಿರುವಾಗ ಯಾರೋ ಬಂದು ದೂರು ನೀಡಿದರು ಎಂದಾಕ್ಷಣ ಪರಿಶೀಲನೆ ನಡೆಸದೇ ಶೋಕಾಸ್‌ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಯಾವ ಉದ್ದೇಶಕ್ಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು.

ರಾಜ್ಯಪಾಲರು, ನಮ್ಮ ಸರ್ಕಾರದ ಪ್ರತಿನಿತ್ಯದ ಆಡಳಿತಕ್ಕೆ ಕುರಿತಂತೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇಶಿಸುವುದಾಗಲಿ ಎಲ್ಲಿಯೂ ಕೇಳಿಲ್ಲ. ಇಂಗ್ಲೀಷ್‌ನಲ್ಲಿ ಸಹಿ ಹಾಕಿದರೂ ಪತ್ರದ ಮೂಲಕ ಮಾಹಿತಿ ಕೇಳುತ್ತಾರೆ. ಬಹುಶಃ ದೇಶದಲ್ಲಿರುವ ಎಲ್ಲಾ ರಾಜ್ಯಗಳಲ್ಲಿ ಹೋಲಿಕೆ ಮಾಡಿ ನೋಡಿದರೆ, ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಮಾತ್ರ ರಾಜ್ಯಪಾಲರು ಸರ್ಕಾರದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂಬಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

4 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

4 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

4 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

4 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

5 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

6 hours ago