ರಾಜ್ಯ

ಬಿ.ಕೆ ಹರಿಪ್ರಸಾದ್‌ಗೆ ನೋಟಿಸ್ ಕೊಡಲ್ಲ: ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, ಹರಿಪ್ರಸಾದ್‌ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್‌ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.

ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್‌ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್‌ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ‌ಇಲ್ಲ.‌ ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್‌ ಕೊಡಬೇಕಾಗುತ್ತೆ ಎಂದು ತಿಳಿಸಿದರು.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

5 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago