ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.
ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ಇಲ್ಲ. ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್ ಕೊಡಬೇಕಾಗುತ್ತೆ ಎಂದು ತಿಳಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…