ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.
ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ಇಲ್ಲ. ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್ ಕೊಡಬೇಕಾಗುತ್ತೆ ಎಂದು ತಿಳಿಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…