ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ಪಕ್ಷದಿಂದ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.
ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ಇಲ್ಲ. ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್ ಕೊಡಬೇಕಾಗುತ್ತೆ ಎಂದು ತಿಳಿಸಿದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…