ರಾಜ್ಯ

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ

ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿರುವುದಕ್ಕೆ ನಮ್ಮ ಅಭ್ಯಂತರ ಇಲ್ಲ. ಕೇಂದ್ರ ಸರ್ಕಾರ ಬಯಸುವುದಾದರೆ ನಾಥುರಾಮ್ ಗೋಡ್ಸೆ ಹೆಸರನ್ನೇ ನಾಮಕರಣ ಮಾಡಿಕೊಳ್ಳಲಿ. ಆದರೆ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಸರಿಳೀಕರಿಸಿರುವುದಾಗಿ ಹೇಳಿರುವ ಕೇಂದ್ರ ಸರ್ಕಾರ ವಿಕಸಿತ್ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಅಭಿಯಾನ ಗ್ರಾಮೀಣ (ವಿಬಿ ಐ ರಾಮ್ ಜಿ) ಕಾಯ್ದೆಯನ್ನು ರೂಪಿಸಲಾಗಿದೆ. ಈ ಕಾಯಿದೆ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯ ಯಥಾವತ್ತು ರೂಪವಾಗಿದೆ. ಆದರೆ ಜನರ ಹಕ್ಕುಗಳನ್ನು ಕಸಿಯುವಂತೆ ಮಾರ್ಪಾಡು ಮಾಡಲಾಗಿದೆ ಎಂದು ದೂರಿದರು.

ಇದನ್ನು ಓದಿ:ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ 

ಗ್ರಾಮೀಣ ಜನರ ಜೀವನೋಪಾಯ, ಪಂಚಾಯಿತಿಗಳ ಅಧಿಕಾರ ಮತ್ತು ರಾಜ್ಯ ಸರ್ಕಾರಗಳ ಸ್ವಾಯತ್ತತೆಗೆ ಕಾಯ್ದೆಯಿಂದ ಧಕ್ಕೆಯಾಗಿದೆ. ಬೇಡಿಕೆ ಆಧಾರಿತ ಮಾದರಿಯಿಂದ ಪೂರೈಕೆ ಆಧರಿತ ವ್ಯವಸ್ಥೆಗೆ ಯೋಜನೆಯನ್ನು ಬದಲಾಯಿಸಲಾಗಿದೆ. ಈ ಮೊದಲು ಉದ್ಯೋಗ ಕಾರ್ಡ್ ಹೊಂದಿದವರು ದೇಶದ ಯಾವ ಭಾಗದಲ್ಲಾದರೂ ಹೋಗಿ ಕೆಲಸ ಮಾಡಬಹುದಿತ್ತು. ಹೊಸ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ಗುರುತಿಸಿದ ಅಥವಾ ನೋಟಿಫೈ ಮಾಡಿದ ಪ್ರದೇಶದಲ್ಲಿ ಮಾತ್ರ ಕೆಲಸ ಮಾಡಬೇಕಾಗಿದೆ. ಈ ಮೊದಲು ಕೂಲಿ ಹಣ ಪಂಚಾಯಿತಿಗಳಿಗೆ ನೇರವಾಗಿ ಬಿಡುಗಡೆಯಾಗುತ್ತಿತ್ತು ಈಗ ಗುತ್ತಿಗೆದಾರರ ಮೂಲಕ ಕೆಲಸ ಮಾಡಿಸಬೇಕಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೃಷಿ ಚಟುವಟಿಕೆಗಳಿಗೆ ಕೂಲಿ ಕಾರ್ಮಿಕರ ಕೊರತೆಯಾಗದಂತೆ ಮತ್ತು ಕೂಲಿಯ ದರ ಹೆಚ್ಚಳವಾಗುವುದನ್ನು ತಡೆಯಲು ವರ್ಷದಲ್ಲಿ ೬೦ ದಿನ ಉದ್ಯೋಗ ಖಾತ್ರಿ ಕೆಲಸಗಳಿಗೆ ರಜೆ ನೀಡುವುದಾಗಿ ಹೊಸ ಕಾಯ್ದೆಯಲ್ಲಿ ತಿಳಿಸಲಾಗಿದೆ. ಭೂ ಮಾಲೀಕರ ಜಮೀನುಗಳಲ್ಲಿ ಕೆಲಸ ಮಾಡಲು ಇಚ್ಚಿಸದೆ ಇದ್ದವರಿಗೆ ಇನ್ನು ಮುಂದೆ ಅನ್ಯ ಮಾರ್ಗ ಇಲ್ಲದೆ, ಬಲ್ಲಾಡ್ಯರು ಕೊಟ್ಟಷ್ಟು ಕೂಲಿಗೆ ಕೆಲಸ ಮಾಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ವಿವರಿಸಿದ್ದರು.

ಕೇಂದ್ರ ಸರ್ಕಾರ ಈ ಮೊದಲು ಉದ್ಯೋಗ ಖಾತ್ರಿಯ ಸಂಪೂರ್ಣ ಕೂಲಿಯನ್ನು ಪಾವತಿ ಮಾಡುತ್ತಿತ್ತು. ಇನ್ನು ಮುಂದೆ ಶೇ.೬೦ರಷ್ಟು ಮಾತ್ರ ಪಾವತಿಸಲಿದೆ. ರಾಜ್ಯ ಸರ್ಕಾರ ಶೇ.೪೦ರಷ್ಟು ವೆಚ್ಚವನ್ನು ಭರಿಸಬೇಕಿದೆ. ಕೇಂದ್ರ ಸರ್ಕಾರದ ಯೋಜನೆಗಳಿಗೆಲ್ಲ ರಾಜ್ಯದ ಪಾಲಿನ ವೆಚ್ಚವನ್ನು ಹೆಚ್ಚಳ ಮಾಡಲಾಗುತ್ತಿದೆ. ವಿಕಸಿತ ಭಾರತ ಮತ್ತು ಆರ್ಥಿಕವಾಗಿ ಸದೃಢವಾಗಿರುವ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವವರಿಗೆ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಪೂರ್ಣ ಪ್ರಮಾಣದ ಅನುದಾನ ಒದಗಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

21 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

23 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

26 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

3 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

3 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

3 hours ago