siddaramaiah
ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಮಿತಿ ಜೊತೆ ಮಾತನಾಡಿದ್ದೇನೆ. ಗೃಹಸಚಿವರೂ ಅವರೇ ಆಗಿರುವುದರಿಂದ ಕೂಡಲೇ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ ಎಂದರು.
ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಹೇಮಾವತಿ ಲಿಂಕ್ ನಾಲಾ ಯೋಜನೆಯಿಂದ ತುಮಕೂರಿಗೆ ತೊಂದರೆ ಆಗುವುದಿಲ್ಲ ಎಂಬ ತಾಂತ್ರಿಕ ವರದಿ ನೀಡಲಾಗಿತ್ತು. ತಾಂತ್ರಿಕ ವರದಿ ಬಂದ ಬಳಿಕವಷ್ಟೇ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಇದನ್ನು ಬಿಜೆಪಿ ಶಾಸಕರು ಒಪ್ಪಿಕೊಂಡಿದ್ದರು ಎಂದರು.
ಆದರೆ ಈಗ ತಾಂತ್ರಿಕ ವರದಿ ಸರಿಯಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ತುಮಕೂರಿನಿಂದ ರಾಮನಗರ ಜಿಲ್ಲೆಗೆ ನೀರು ಕೊಂಡೊಯ್ಯುವ ಈ ಯೋಜನೆಗೆ 1 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಹಣವೂ ಬಿಡುಗಡೆಯಾಗಿದೆ. ಈ ಹಿಂದೆ ಬಿಜೆಪಿಯವರು ತೊಂದರೆಯಾಗುತ್ತದೆ ಎಂದು ಹೇಳಿದ್ದ ಕಾರಣಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ಸರ್ಕಾರ ವರದಿ ಪಡೆದಿದೆ. ಆ ವರದಿ ಪ್ರಕಾರ ತುಮಕೂರಿಗೆ ತೊಂದರೆ ಇಲ್ಲ ಎಂಬ ಮಾಹಿತಿ ಇದೆ. ಇಂದಿನ ಪ್ರತಿಭಟನೆ ಕುರಿತಂತೆ ವರದಿ ಪಡೆಯುವುದಾಗಿ ಹೇಳಿದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…