ರಾಜ್ಯ

ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಮಿತಿ ಜೊತೆ ಮಾತನಾಡಿದ್ದೇನೆ. ಗೃಹಸಚಿವರೂ ಅವರೇ ಆಗಿರುವುದರಿಂದ ಕೂಡಲೇ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ ಎಂದರು.

ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಹೇಮಾವತಿ ಲಿಂಕ್ ನಾಲಾ ಯೋಜನೆಯಿಂದ ತುಮಕೂರಿಗೆ ತೊಂದರೆ ಆಗುವುದಿಲ್ಲ ಎಂಬ ತಾಂತ್ರಿಕ ವರದಿ ನೀಡಲಾಗಿತ್ತು. ತಾಂತ್ರಿಕ ವರದಿ ಬಂದ ಬಳಿಕವಷ್ಟೇ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಇದನ್ನು ಬಿಜೆಪಿ ಶಾಸಕರು ಒಪ್ಪಿಕೊಂಡಿದ್ದರು ಎಂದರು.

ಆದರೆ ಈಗ ತಾಂತ್ರಿಕ ವರದಿ ಸರಿಯಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ತುಮಕೂರಿನಿಂದ ರಾಮನಗರ ಜಿಲ್ಲೆಗೆ ನೀರು ಕೊಂಡೊಯ್ಯುವ ಈ ಯೋಜನೆಗೆ 1 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಹಣವೂ ಬಿಡುಗಡೆಯಾಗಿದೆ. ಈ ಹಿಂದೆ ಬಿಜೆಪಿಯವರು ತೊಂದರೆಯಾಗುತ್ತದೆ ಎಂದು ಹೇಳಿದ್ದ ಕಾರಣಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ಸರ್ಕಾರ ವರದಿ ಪಡೆದಿದೆ. ಆ ವರದಿ ಪ್ರಕಾರ ತುಮಕೂರಿಗೆ ತೊಂದರೆ ಇಲ್ಲ ಎಂಬ ಮಾಹಿತಿ ಇದೆ. ಇಂದಿನ ಪ್ರತಿಭಟನೆ ಕುರಿತಂತೆ ವರದಿ ಪಡೆಯುವುದಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

22 mins ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

1 hour ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

6 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

8 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago