ರಾಜ್ಯ

ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಮಿತಿ ಜೊತೆ ಮಾತನಾಡಿದ್ದೇನೆ. ಗೃಹಸಚಿವರೂ ಅವರೇ ಆಗಿರುವುದರಿಂದ ಕೂಡಲೇ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ ಎಂದರು.

ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಹೇಮಾವತಿ ಲಿಂಕ್ ನಾಲಾ ಯೋಜನೆಯಿಂದ ತುಮಕೂರಿಗೆ ತೊಂದರೆ ಆಗುವುದಿಲ್ಲ ಎಂಬ ತಾಂತ್ರಿಕ ವರದಿ ನೀಡಲಾಗಿತ್ತು. ತಾಂತ್ರಿಕ ವರದಿ ಬಂದ ಬಳಿಕವಷ್ಟೇ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಇದನ್ನು ಬಿಜೆಪಿ ಶಾಸಕರು ಒಪ್ಪಿಕೊಂಡಿದ್ದರು ಎಂದರು.

ಆದರೆ ಈಗ ತಾಂತ್ರಿಕ ವರದಿ ಸರಿಯಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ತುಮಕೂರಿನಿಂದ ರಾಮನಗರ ಜಿಲ್ಲೆಗೆ ನೀರು ಕೊಂಡೊಯ್ಯುವ ಈ ಯೋಜನೆಗೆ 1 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಹಣವೂ ಬಿಡುಗಡೆಯಾಗಿದೆ. ಈ ಹಿಂದೆ ಬಿಜೆಪಿಯವರು ತೊಂದರೆಯಾಗುತ್ತದೆ ಎಂದು ಹೇಳಿದ್ದ ಕಾರಣಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ಸರ್ಕಾರ ವರದಿ ಪಡೆದಿದೆ. ಆ ವರದಿ ಪ್ರಕಾರ ತುಮಕೂರಿಗೆ ತೊಂದರೆ ಇಲ್ಲ ಎಂಬ ಮಾಹಿತಿ ಇದೆ. ಇಂದಿನ ಪ್ರತಿಭಟನೆ ಕುರಿತಂತೆ ವರದಿ ಪಡೆಯುವುದಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

25 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

27 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

29 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

30 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

32 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

36 mins ago