ಬೆಂಗಳೂರು : ಕೊನೇ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದೆ ನನಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣ ರಾಜಕಾರಣದಿಂದ ದೂರ ಇರಬೇಕು ಎಂದವನನ್ನು ರಾಜ್ಯದ ಎಲ್ಲಾ ಮುಖಂಡರು ಸೇರಿ ನನ್ನನ್ನು ಚುನಾವಣೆಗೆ ಎಳೆದು ತಂದರು. ಆದರೆ ಕೊನೆ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದದ್ದು ನನಗೆ ಮುಜುಗರ ಉಂಟು ಮಾಡುವಂತ ಕೆಸಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕಾರಣದಲ್ಲಿ ಏರು-ಪೇರು ಸಹಜ. ಆದರೆ ಎಲ್ಲಾ ತಿಳಿದು ಸ್ವಾರ್ಥ ರಾಜಕಾರಣ ಮಾಡಿದಾಗ ಬೇಸರವಾಗುತ್ತದೆ ಎಂದರು.
ರಾಜಕೀಯದ ಮುಂದಿನ ನಡೆ ಬಗ್ಗೆ ಮನೆಯವರೊಂದಿಗೆ ಚರ್ಚಿಸಿ ನಾಳೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಈಶ್ವರಪ್ಪರನ್ನು ಭೇಟಿಯಾಗಿದ್ದೆ: ಈಶ್ವರಪ್ಪ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ಪಕ್ಷ ಕಟ್ಟಿದವರಿಗೆ ಅನ್ಯಾಯವಾಗಿದೆ. ನಾವೆಲ್ಲಾ ಸೇರಿ ಒಟ್ಟಾಗಿ ಹೋಗಿ ಮೇಲ್ಮಟ್ಟದಲ್ಲಿ ಮಾತನಾಡೋಣ ಎಂದಿದ್ದೆ. ಆದರೆ ಅವರು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಅದರ ಬಗ್ಗೆ ನಾನೇನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…