ಬೆಂಗಳೂರು : ಕೊನೇ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದೆ ನನಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣ ರಾಜಕಾರಣದಿಂದ ದೂರ ಇರಬೇಕು ಎಂದವನನ್ನು ರಾಜ್ಯದ ಎಲ್ಲಾ ಮುಖಂಡರು ಸೇರಿ ನನ್ನನ್ನು ಚುನಾವಣೆಗೆ ಎಳೆದು ತಂದರು. ಆದರೆ ಕೊನೆ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದದ್ದು ನನಗೆ ಮುಜುಗರ ಉಂಟು ಮಾಡುವಂತ ಕೆಸಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕಾರಣದಲ್ಲಿ ಏರು-ಪೇರು ಸಹಜ. ಆದರೆ ಎಲ್ಲಾ ತಿಳಿದು ಸ್ವಾರ್ಥ ರಾಜಕಾರಣ ಮಾಡಿದಾಗ ಬೇಸರವಾಗುತ್ತದೆ ಎಂದರು.
ರಾಜಕೀಯದ ಮುಂದಿನ ನಡೆ ಬಗ್ಗೆ ಮನೆಯವರೊಂದಿಗೆ ಚರ್ಚಿಸಿ ನಾಳೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಈಶ್ವರಪ್ಪರನ್ನು ಭೇಟಿಯಾಗಿದ್ದೆ: ಈಶ್ವರಪ್ಪ ಅವರನ್ನು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ಪಕ್ಷ ಕಟ್ಟಿದವರಿಗೆ ಅನ್ಯಾಯವಾಗಿದೆ. ನಾವೆಲ್ಲಾ ಸೇರಿ ಒಟ್ಟಾಗಿ ಹೋಗಿ ಮೇಲ್ಮಟ್ಟದಲ್ಲಿ ಮಾತನಾಡೋಣ ಎಂದಿದ್ದೆ. ಆದರೆ ಅವರು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಅದರ ಬಗ್ಗೆ ನಾನೇನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…