Mysore
27
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಆರ್‌ಎಸ್‌ಎಸ್‌ ಅನ್ನು ಯಾರೂ ಬ್ಯಾನ್‌ ಮಾಡಲು ಆಗಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಆರ್‌ಎಸ್‌ಎಸ್‌ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ, ಆರ್‌ಎಸ್‌ಎಸ್‌ ಬ್ಯಾನ್‌ ಮಾಡುತ್ತೇವೆ ಎಂದು ಯಾರೂ ಹೇಳಿಲ್ಲ. ಯಾರು ಸಹ ಆರ್‌ಎಸ್‌ಎಸ್‌ ಬ್ಯಾನ್‌ ಮಾಡೋಕೆ ಆಗಲ್ಲ ಎಂದು ಹೇಳಿದರು.

ಆರ್‌ಎಸ್‌ಎಸ್‌ ಚಟುವಟಿಕೆಗಳ ಮೇಲೆ ನಿಷೇಧ ಬೇರೆ, ಇದು ಬೇರೆ. ಆರ್‌ಎಸ್‌ಎಸ್ ಅನ್ನು ಇದುವರೆಗೆ ಯಾರೂ ಕೂಡ ಬ್ಯಾನ್‌ ಮಾಡಿಲ್ಲ ಎಂದು ಹೇಳಿದರು.

Tags:
error: Content is protected !!