ಬೆಂಗಳೂರು: ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.
ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.
ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…