ಬೆಂಗಳೂರು: ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.
ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.
ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…