ಬೆಂಗಳೂರು: ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ ಮತ್ತು ಅಶೋಕ್ ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ತಾಲೂಕು ಪಂಚಾಯ್ತಿ ಇಒ, ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ. ಗೊಂದಲಗಳು ಆದಾಗ ಇಒ ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ. ಅವರು ತಮ್ಮ ಕಚೇರಿಗೇ ದಾಖಲಾತಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ, ಮನೆಗೆ ತೆಗೆದುಕೊಂಡು ಹೋಗಿಲ್ಲ ಎಂದು ಸಿಟ್ಟಾಗಿ ಹಾರಿಕೆ ಉತ್ತರ ನೀಡಿದ್ದಾರೆ.
ಕೆರಗೋಡು ಘಟನೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಗೆ ಆಗ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಮಲತಾ ಅವರು ಮಂಡ್ಯ ಜನರಿಗೆ ಸಲಹೆ ಮಾಡೋದು ಬೇಡ. ಬಿಜೆಪಿಯಿಂದ ಟಿಕೆಟ್ ಪಡೆಯೋಕೆ ಬಿಜೆಪಿ ಪರವಾಗಿ ಮಾತಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ದೇವೇಗೌಡರಿಂದ ಬೆಳೆದು ದೇವೇಗೌಡರ ವಿರುದ್ಧ ಮಾತಾಡೋದು ಸರಿಯಲ್ಲ ಎಂಬ ಪುಟ್ಟರಾಜು ಹೇಳಿಕೆಗೆ ಉತ್ತರಿಸಿದ ಸಚಿವರು, ನನ್ನ ಇತಿಹಾಸವನ್ನ ಅವನು ಓದೋಕೆ ಹೇಳಿ ಮೊದಲು. ನಾನು ಹೇಗೆ ಬಂದೆ ಅಂತ ಅವನು ತಿಳಿದುಕೊಳ್ಳಲಿ. ಮಂಡ್ಯಕ್ಕೆ ದೇವೇಗೌಡರ ಕೊಡುಗೆ ಏನು? ದೇವೇಗೌಡರಿಗೆ ಮಂಡ್ಯದ ಕೊಡುಗೆ ಏನು? ಅಂತ ತಿಳಿದುಕೊಳ್ಳಲಿ ಎಂದು ಪುಟ್ಟರಾಜು ವಿರುದ್ಧ ಏಕವಚನದಲ್ಲೇ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…