ಬೆಂಗಳೂರು: ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ ಮತ್ತು ಅಶೋಕ್ ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ತಾಲೂಕು ಪಂಚಾಯ್ತಿ ಇಒ, ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ. ಗೊಂದಲಗಳು ಆದಾಗ ಇಒ ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ. ಅವರು ತಮ್ಮ ಕಚೇರಿಗೇ ದಾಖಲಾತಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ, ಮನೆಗೆ ತೆಗೆದುಕೊಂಡು ಹೋಗಿಲ್ಲ ಎಂದು ಸಿಟ್ಟಾಗಿ ಹಾರಿಕೆ ಉತ್ತರ ನೀಡಿದ್ದಾರೆ.
ಕೆರಗೋಡು ಘಟನೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಗೆ ಆಗ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಮಲತಾ ಅವರು ಮಂಡ್ಯ ಜನರಿಗೆ ಸಲಹೆ ಮಾಡೋದು ಬೇಡ. ಬಿಜೆಪಿಯಿಂದ ಟಿಕೆಟ್ ಪಡೆಯೋಕೆ ಬಿಜೆಪಿ ಪರವಾಗಿ ಮಾತಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ದೇವೇಗೌಡರಿಂದ ಬೆಳೆದು ದೇವೇಗೌಡರ ವಿರುದ್ಧ ಮಾತಾಡೋದು ಸರಿಯಲ್ಲ ಎಂಬ ಪುಟ್ಟರಾಜು ಹೇಳಿಕೆಗೆ ಉತ್ತರಿಸಿದ ಸಚಿವರು, ನನ್ನ ಇತಿಹಾಸವನ್ನ ಅವನು ಓದೋಕೆ ಹೇಳಿ ಮೊದಲು. ನಾನು ಹೇಗೆ ಬಂದೆ ಅಂತ ಅವನು ತಿಳಿದುಕೊಳ್ಳಲಿ. ಮಂಡ್ಯಕ್ಕೆ ದೇವೇಗೌಡರ ಕೊಡುಗೆ ಏನು? ದೇವೇಗೌಡರಿಗೆ ಮಂಡ್ಯದ ಕೊಡುಗೆ ಏನು? ಅಂತ ತಿಳಿದುಕೊಳ್ಳಲಿ ಎಂದು ಪುಟ್ಟರಾಜು ವಿರುದ್ಧ ಏಕವಚನದಲ್ಲೇ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…