R Ashok
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ಕೂಡ ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.
ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್ ಬಹಳ ಚಿಂತೆಯಲ್ಲಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…