ರಾಜ್ಯ

ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಜಾತಿ ಜನಗಣತಿಯ ವೇಳೆ ಉಪಪಂಗಡಗಳ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ. ಎಲ್ಲರೂ ಸ್ವಾಗತಿಸಿದ್ದಾರೆ. ಆದರೆ ಕೆಲವು ಜಾತಿಗಳವರು ಉದ್ಯೋಗ, ಶಿಕ್ಷಣದ ಮೀಸಲಾತಿಗಾಗಿ ಲಿಂಗಾಯತ ವೀರಶೈವ ಎಂದು ಬರೆಸದೆ ವೃತ್ತಿ ಆಧಾರಿತ ಜಾತಿಯ ಹೆಸರನ್ನು ನಮೂದಿಸುತ್ತಾರೆ ಎಂದರು.

ಯಾರು, ಯಾವುದೇ ಧರ್ಮವನ್ನಾದರೂ ಪಾಲನೆ ಮಾಡಲು ಅವಕಾಶ ಇದೆ. ಆದರೆ ಜಾತಿ ಜನಗಣತಿಯ ಸಂದರ್ಭದಲ್ಲಿ ಸ್ಪಷ್ಟವಾದ ನಮೂದು ಮಾಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಮಠಾಧೀಶರು, ಸಮುದಾಯದ ಮುಖಂಡರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜನರಲ್ಲಿ ತಿಳುವಳಿಕೆ ಮೂಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲೂ ಮತ್ತಷ್ಟು ಸಮಸ್ಯೆಗಳಾಗುತ್ತವೆ. ವೀರಶೈವ ಲಿಂಗಾಯತ ಸಮುದಾಯದಲ್ಲೇ 100ಕ್ಕೂ ಹೆಚ್ಚು ಒಳಪಂಗಡಗಳಿವೆ. ಎಲ್ಲರಿಗೂ ಸರಿಯಾದ ಮಾಹಿತಿ ನೀಡಿದರೆ ನೈಜ್ಯ ದತ್ತಾಂಶ ಸಿಗಲು ಸಾಧ್ಯ ಎಂದು ತಿಳಿಸಿದರು.

ಇನ್ನು ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸಲು ನಿಯಮ ಬಾಹಿರವಾಗಿ ನಿಷೇಧ ಹೇರಲಾಗಿದೆ. ತಮಿಳುನಾಡು ಸೇರಿದಂತೆ ರಾಜ್ಯದ ಗಡಿಭಾಗಗಳಲ್ಲಿ ನೆರೆಯ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಜಾನುವಾರುಗಳು ರಾಜ್ಯದ ಅರಣ್ಯ ಪ್ರದೇಶದೊಳಗೆ ಬರುತ್ತಿದ್ದು, ಇಲ್ಲಿನ ಹಸಿರು ಹುಲ್ಲುಗಾವಲನ್ನು ಬರಿದು ಮಾಡುತ್ತಿವೆ. ದಟ್ಟಾರಣ್ಯ ಪ್ರದೇಶದಲ್ಲಿರುವ ವನ್ಯಜೀವಿಗಳಿಗೆ ಆಹಾರದ ಕೊರತೆ ಎದುರಾಗುತ್ತಿದೆ ಎಂದರು.

ಈ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳ ಮೇವಿಗೆ ಅವಕಾಶ ನಿರಾಕರಿಸಲಾಗಿದೆ. ಇತ್ತೀಚೆಗೆ ತಾಯಿ ಹಾಗೂ ನಾಲ್ಕು ಮರಿಗಳ ವಿಷಪ್ರಾಶನ ಪ್ರಕರಣದಲ್ಲಿ ಜಾನುವಾರುಗಳ ಮೇವಿನ ಹಿನ್ನೆಲೆಯಿತ್ತು. ಹೀಗಾಗಿ ಅರಣ್ಯ ಕಾಯ್ದೆಯ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago