opposite partys drama has been revealed in front of peoples
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಪ್ರಧಾನಕಾರ್ಯದರ್ಶಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸೇರಿದಂತೆ ಎಲ್ಲರೂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣಕ್ಕೆ ಅನಿವಾರ್ಯ ಎಂದು ಹೇಳಿದ್ದಾರೆ. ಇದರಲ್ಲಿ ಯಾರೂ ವಿರೋಧ ಮಾಡಿಲ್ಲ ಮತ್ತು ಸಿದ್ದರಾಮಯ್ಯ ಅವರು ಮುಂದಿನ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ನಂಬಿಕೆ ನಮ್ಮದಾಗಿದೆ ಎಂದು ಹೇಳಿದರು.
ನಮ್ಮ ಪಕ್ಷದ ಶಾಸಕರಾಗಲೀ, ಮಂತ್ರಿಗಳಾಗಲೀ ಅಥವಾ ನಾಯಕರಾಗಲೀ ಯಾರೂ ಪಕ್ಷದ ವಿರುದ್ಧ, ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡಿಲ್ಲ. ಅವರೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪರವಾಗಿಯೇ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಇದನ್ನು ಓದಿ: ಗೃಹ ನಿರ್ಮಾಣದ ಕನಸು ನನಸಾಗಿಸುವಲ್ಲಿ ಸಹಕಾರ ವಲಯದ ಪಾತ್ರ ಶ್ಲಾಘನೀಯ : ಶಾಸಕ ಜಿ.ಟಿ. ದೇವೇಗೌಡ
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ನವೆಂಬರ್ ಕ್ರಾಂತಿ ಇರುವುದು ಬಿಜೆಪಿಯಲ್ಲಿ ಮಾತ್ರ. ಆ ಪಕ್ಷದ ರೀತಿಯಲ್ಲಿ ನಮ್ಮ ಕಾಂಗ್ರೆಸ್ ನಲ್ಲಿ ಯಾವುದೇ ಕಿತ್ತಾಟವಿಲ್ಲ. ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿ.ವೈ.ವಿಜಯೇಂದ್ರ ಅವರ ನಡುವೆಯೇ ಕಿತ್ತಾಟ ನಡೆಯುತ್ತಿದೆ ಎಂದು ಬೈರತಿ ಸುರೇಶ್ ಮಾರುತ್ತರ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನತೆಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಜನರು ಖುಷಿಯಾಗಿದ್ದಾರೆ. ನಮ್ಮದೇನಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಕೆಲಸ ಮಾಡುವ ಸರ್ಕಾರವಾಗಿದೆ. ಹೈಕಮಾಂಡ್ ತನ್ನದೇ ಆದ ರೀತಿಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುತ್ತದೆ. ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಹೈಕಮಾಂಡ್ ಸದೃಢವಾಗಿದ್ದು,. ಈ ಅನುಭವದ ಆಧಾರದಲ್ಲಿಯೇ ಎಲ್ಲಾ ಸಚಿವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿರಬಹುದು ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…