ರಾಜ್ಯ

ಭಾರತವನ್ನು ಒಡೆಯುವ ಮಾತು ಯಾರೂ ಆಡಬಾರದು: ಪರಮೇಶ್ವರ್

ಬೆಂಗಳೂರು : ನಮ್ಮ ಭಾರತ ಭವ್ಯ ಭಾರತ. ನಮ್ಮ ಭಾರತವನ್ನು ಯಾರು ಒಡೆಯುವ ಮಾತು ಅಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಪ್ರತ್ಯೇಕ ದಕ್ಷಿಣ ಭಾರತ ನಿರ್ಮಾಣ ಕುರಿತು ಸಂಸದ ಡಿ.ಕೆ ಸುರೇಶ್‌ ನೀಡಿದ ಹೇಳಿಕೆ ವಿಚಾರವಾಗಿ, ಡಿಕೆ ಸುರೇಶ್‌ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಖಂಡ ಭಾರತ ನಿರ್ಮಮಾಣಕ್ಕೆ ಸಾವಿರಾರು ಜನರ ಜೀವ ಅರ್ಪಣೆಯಾಗಿದೆ. ಗಾಂಧೀಜಿ ಅವರಿಂದ ಹಿಡಿದು, ಅನೇಕ ಹೋರಾಟಗಾರರು ದೇಶವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದಾರೆ. ಅದರಲ್ಲಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದು, ನೂರಾರು ವರ್ಷಗಳ ಫಲವಾಗಿ ನಮಗೆ ಭವ್ಯ ಭಾರತ ನಿರ್ಮಾಣವಾಗಿದೆ. ಹೀಗಾಗಿ ಯಾರೇ ಆದರೂ ದೇಶವನ್ನು ಒಗ್ಗೂಡಿಸಲು ಮಾತನಾಡಬೇಕು, ಬದಲಾಗಿ ಒಡೆಯುವ ಮಾತು ಸರಿಯಲ್ಲ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ಗೆ ತಿವಿದಿದ್ದಾರೆ.

ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳೀದ್ದಾರೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

3 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

17 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

22 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

1 hour ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago