ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಪುರಾವೆ ಇಲ್ಲದೆ ರಾಜಕೀಯ ಪಕ್ಷ, ಮುಖಂಡರ ಮೇಲೆ ತನಿಖೆ ಮಾಡುವುದಿಲ್ಲ. ನ್ಯಾಷನಲ್ ಹೆರಾಲ್ಡ್ ಪಬ್ಲಿಕ್ ಟ್ರಸ್ಟ್. ಅದನ್ನು ಪ್ರೈವೆಟ್ ಟ್ರಸ್ಟ್ ಮಾಡಿಕೊಂಡು ಆಸ್ತಿ ಲಪಟಾಯಿಸಿದ್ದಾರೆ. ಆ ವಿಚಾರವಾಗಿ ತನಿಖೆಗೆ ಬರಲು ಹೇಳಿದ್ದಾರೆ. ಡಿಕೆಶಿ ಅವರು ನೊಟೀಸ್ ಕೊಟ್ಟಿರೋದಕ್ಕೆ ಕಿರುಕುಳ ಅಂದಿರುವುದು ಮೂರ್ಖತನದ ಪರಮಾವಧಿ ಎಂದು ಅಪಹಾಸ್ಯ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್, ಪೊಜೆಕ್ಟರ್ ಖರೀದಿ ಅಕ್ರಮ, ಲೋಕಾಯುಕ್ತ ದಾಳಿ ವಿಚಾರಕ್ಕೆ ಉತ್ತರಿಸಿದ ಅವರು, ಇದರ ಬಗ್ಗೆ ನಾವು ಸದನದಲ್ಲಿ ಚರ್ಚೆ ಮಾಡುತ್ತೇವೆ. ಆ ಪುಣ್ಯಾತ್ಮ ಶಿಕ್ಷಣ ಸಚಿವರಿಗೆ ಯಾರು ಮಾಹಿತಿ ನೀಡುತ್ತಿದ್ದಾರೋ ಗೊತ್ತಿಲ್ಲ, ಏನೇನೋ ಮಾತನಾಡುತ್ತಾರೆ ಎಂದು ಗುಡುಗಿದರು.
ಎಚ್ಡಿಕೆ ಮನುವಾದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರ ಬಗ್ಗೆ ಏನು ಹೇಳಿದ್ದಾರೋ ಅದಕ್ಕೆ ಕುಮಾರಸ್ವಾಮಿ ಅವರೇ ಉತ್ತರ ಕೊಡುತ್ತಾರೆ. ಇದು ಜನ ವಿರೋಧಿ ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.
ಇನ್ನು ಬೆಳಗಾವಿಯಲ್ಲಿ ಡಿಸೆಂಬರ್ 9ರಂದು ಸುಮಾರು 15 ರಿಂದ 20 ಸಾವಿರ ರೈತರ ಜೊತೆಗೆ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…