ರಾಜ್ಯ

ಹಿಜಾಬ್‌ ನಿಷೇಧ ವಾಪಾಸ್‌ ವಿರೋಧಿಸಿ ಪ್ರತಿಭಟನೆ ಬೇಡ: ಬಿಎಸ್‌ ಯಡಿಯೂರಪ್ಪ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್‌ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್‌ ಸರ್ಕಾರ ವಾಪಾಸ್‌ ಪಡೆದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುವ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು, ಈ ಬಗ್ಗೆ ಹೋರಾಟ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ನೆನ್ನೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಜಾಬ್‌ ನಿಷೇಧವನ್ನು ವಾಪಾಸ್‌ ಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.

ಇಂದು (ಶನಿವಾರ) ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಭಂಡ ಸರ್ಕಾರವಾಗಿದೆ. ತಾವು ನೀಡಿದ ಗ್ಯಾರೆಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೇ ಈ ರೀತಿಯ ಕೆಲಸಕ್ಕೆ ಕೈಹಾಕಿ ಜನರ ದಿಕ್ಕು ತಪ್ಪಿಸುತ್ತಿದೆ. ಇದನ್ನು ಯಾರು ಒಪ್ಪುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರ ಹಿಜಾಬ್‌ ನಿಷೇಧ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ.

ಹಿಜಾಬ್‌ ನಿಷೇಧ ಮಾಡುವಂತೆ ಯಾವ ಮುಸ್ಲಿಂ ನಾಯಕರು ಕೇಳಿದ್ದರು? ಇಂತಹ ದೊಂಬರಾಟಗಳನ್ನು ಸಿಎಂ ಬಿಡಬೇಕು. ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಸಮನಾಗಿರಬೇಕು. ಹಿಜಾಬ್‌ ನಿಷೇಧ ಮೂಲಕ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸುವ ಕೆಲಸವನ್ನು ಸರ್ಕಾರ ಬಿಡಬೇಕು ಎಂದು ಹೇಳಿದರು.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

1 hour ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago