ರಾಜ್ಯ

ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಯಾವ ರೀತಿಯ ಹುದ್ದೆ ನೀಡಿದ್ದಾರೋ ಗೊತ್ತಿಲ್ಲ, ವಿಷಯ ತಿಳಿದ ಬಳಿಕ ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಒಂದೊಂದು ಪತ್ರಿಕೆಗಳಲ್ಲಿ ಒಂದೊಂದು ರೀತಿ ಬಂದಿದೆ. ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ಗೊತ್ತಿಲ್ಲ. ಓಬಿಸಿ ಸಮುದಾಯಗಳ ಸಭೆ ಮಾಡಿ ಎಂದು ಎಐಸಿಸಿಯ ಓಬಿಸಿ ಘಟಕದ ಅಧ್ಯಕ್ಷರು ಸೂಚನೆ ನೀಡಿದರು. ಅದರಂತೆ 15ರಂದು ಕರ್ನಾಟಕದಲ್ಲಿ ರಾಷ್ಟ್ರೀಯ ಸಭೆ ನಿಗದಿ ಮಾಡಿದ್ದೇನೆ ಎಂದರು.

ಎಐಸಿಸಿ ಹುದ್ದೆ ಕೊಟ್ಟಾಗ ಅದನ್ನು ಬಿಟ್ಟು ಓಡಿಹೋಗಲು ಸಾಧ್ಯವಿಲ್ಲ. ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ. ನನ್ನನ್ನು ಸಂಚಾಲಕನನ್ನಾಗಿ ಮಾಡಲಾಗಿದೆಯೋ ಅಥವಾ ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ತಿಳಿಯದೆ ನಾನು ಪ್ರತಿಕ್ರಿಯಿಸುವುದಿಲ್ಲ. ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇನೆ. ತಾವು ಯಾವುದೇ ಹುದ್ದೆಯನ್ನೂ ಕೇಳಿರಲಿಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಅವುಗಳನ್ನು ಬಡವರ ಅಭಿವೃದ್ಧಿಗಾಗಿ ರೂಪಿಸಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಸೇತುವೆಗಳ ನಿರ್ಮಾಣ ಸೇರಿದಂತೆ ಇತರ ಕಾಮಗಾರಿಗಳಿಗೆ ಹಣ ನೀಡಲಾಗುತ್ತಿದೆ. ಪಕ್ಷಾತೀತವಾಗಿ ಎಲ್ಲಾ ಪಕ್ಷದವರಿಗೂ ಹಣ ನೀಡುತ್ತಿರುವುದಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

1 min ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

3 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

3 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

3 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

3 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

3 hours ago