2028 karnataka assembly election
ಬೆಂಗಳೂರು: ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಯಾವ ರೀತಿಯ ಹುದ್ದೆ ನೀಡಿದ್ದಾರೋ ಗೊತ್ತಿಲ್ಲ, ವಿಷಯ ತಿಳಿದ ಬಳಿಕ ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಒಂದೊಂದು ಪತ್ರಿಕೆಗಳಲ್ಲಿ ಒಂದೊಂದು ರೀತಿ ಬಂದಿದೆ. ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ಗೊತ್ತಿಲ್ಲ. ಓಬಿಸಿ ಸಮುದಾಯಗಳ ಸಭೆ ಮಾಡಿ ಎಂದು ಎಐಸಿಸಿಯ ಓಬಿಸಿ ಘಟಕದ ಅಧ್ಯಕ್ಷರು ಸೂಚನೆ ನೀಡಿದರು. ಅದರಂತೆ 15ರಂದು ಕರ್ನಾಟಕದಲ್ಲಿ ರಾಷ್ಟ್ರೀಯ ಸಭೆ ನಿಗದಿ ಮಾಡಿದ್ದೇನೆ ಎಂದರು.
ಎಐಸಿಸಿ ಹುದ್ದೆ ಕೊಟ್ಟಾಗ ಅದನ್ನು ಬಿಟ್ಟು ಓಡಿಹೋಗಲು ಸಾಧ್ಯವಿಲ್ಲ. ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ. ನನ್ನನ್ನು ಸಂಚಾಲಕನನ್ನಾಗಿ ಮಾಡಲಾಗಿದೆಯೋ ಅಥವಾ ಯಾವ ರೀತಿ ಹುದ್ದೆ ನೀಡಿದ್ದಾರೆ ಎಂದು ತಿಳಿಯದೆ ನಾನು ಪ್ರತಿಕ್ರಿಯಿಸುವುದಿಲ್ಲ. ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇನೆ. ತಾವು ಯಾವುದೇ ಹುದ್ದೆಯನ್ನೂ ಕೇಳಿರಲಿಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಅವುಗಳನ್ನು ಬಡವರ ಅಭಿವೃದ್ಧಿಗಾಗಿ ರೂಪಿಸಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಸೇತುವೆಗಳ ನಿರ್ಮಾಣ ಸೇರಿದಂತೆ ಇತರ ಕಾಮಗಾರಿಗಳಿಗೆ ಹಣ ನೀಡಲಾಗುತ್ತಿದೆ. ಪಕ್ಷಾತೀತವಾಗಿ ಎಲ್ಲಾ ಪಕ್ಷದವರಿಗೂ ಹಣ ನೀಡುತ್ತಿರುವುದಾಗಿ ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…