Mysore
25
overcast clouds

Social Media

ಮಂಗಳವಾರ, 26 ಮೇ 2026
Light
Dark

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

DCM DK Shivakumar

ನವದೆಹಲಿ: ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ ತಿಂಗಳ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿಎಂ ನೇತೃತ್ವದಲ್ಲಿ ಪಕ್ಷದ ಸಂಘಟನೆ ವಿಚಾರವಾಗಿ ನಡೆಯಲಿದೆ ಎಂದರು.

ಆದ್ದರಿಂದ ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಈ ವಿಚಾರವಾಗಿ ಚರ್ಚೆ ಮಾಡಲು ಇದು ಸೂಕ್ತ ಸಮಯವಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!