ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು ಎಂದಿದ್ದಾರೆ.
ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ.
ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ.
ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ.
ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದರು
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…